ಹಂಪಿ | ಪಟ್ಟಣ, UNESCO World Heritage Site (en)

India / Karnataka / Kamalapuram /
 ಪಟ್ಟಣ, UNESCO World Heritage Site (en)

ವಿಶ್ವ ಸಂರಕ್ಷ್ಣಣಾ ಸ್ಮಾರಕ
ಹಂಪೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಈ ಊರು, ೧೩೩೬ರಿಂದ ೧೫೬೫ರವರೆಗೆ ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು 'ಪಂಪ' ಎಂದಿತ್ತು, ಅಂದರೆ ತುಂಗಭದ್ರ ನದಿ ಎಂದರ್ಥ. ವರ್ಷಗಳು ಕಳೆದಂತೆ ಇದು 'ವಿಜಯನಗರ' ಮತ್ತು 'ವಿರುಪಾಕ್ಷಪುರ' ಎಂದು ಕರೆಯಲ್ಪಟ್ಟಿತು. ಹಂಪೆಯನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣ ಎಂದು ಘೋಷಿಸಿದೆ.
ವಿಜಯನಗರ ಸಾಮ್ರಾಜ್ಯದ ಅತೀ ಯಶಸ್ವಿ ಒಡೆಯನಾದ ಕೃಷ್ಣದೇವರಾಯನ ಕಾಲದಲ್ಲಿ ಹಂಪೆ ಬಜಾರ್ ಎಂದೆನ್ನಿಸಿ ಕೊಂಡ ಬೀದಿಯಲ್ಲಿ ವಜ್ರಾಭರಣಗಳನ್ನು ತೂಕದ ಮಾದರಿಯಲ್ಲಿ ಮಾರಲ್ಪಡುತ್ತಿದ್ದರಂತೆ. ಕೃಷ್ಣದೇವರಾಯನ ರಾಜ್ಯಭಾರ ಮುಗಿದ ನಂತರ ವಿಜಯನಗರ ಸಾಮ್ರಾಜ್ಯ ತನ್ನ ಪ್ರಾಬಲ್ಯವನ್ನು ನಿಧಾನವಾಗಿ ಕಳೆದು ಕೊಳ್ಳುತ್ತಾ ಬಂತು. ಕೊನೆಗೆ ತಾಳೀಕೋಟೆಯ ಯುದ್ಧದಲ್ಲಿ ಮುಸ್ಲಿಂ ಸಾಮ್ರಾಜ್ಯದಿಂದ ಬಂದ ಆಕ್ರಮಣವನ್ನು ತಡೆಯದೆ ಅಂತ್ಯಗೊಂಡಿತು. ಹಂಪೆಯಲ್ಲಿದ್ದ ಅನೇಕ ಸ್ಮಾರಕಗಳು ನಾಶವಾದವು.
ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಭಗಳು, ವಿಶ್ವವಿಖ್ಯಾತ ಕಲ್ಲಿನ ರಥ,ಮಹಾನವಮಿ ದಿಬ್ಬ, ಸಾಸಿವೆ ಕಾಳು ಗಣಪತಿ, ಉಗ್ರ ನರಸಿಂಹ, ಕಮಲ ಮಹಲ್ , ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ.
Nearby cities:
ಕಕ್ಷೆಗಳು:   15°19'42"N   76°28'23"E
  •  171 ಕಿಮೀ
  •  254 ಕಿಮೀ
  •  314 ಕಿಮೀ
  •  316 ಕಿಮೀ
  •  328 ಕಿಮೀ
  •  433 ಕಿಮೀ
  •  447 ಕಿಮೀ
  •  452 ಕಿಮೀ
  •  466 ಕಿಮೀ
  •  771 ಕಿಮೀ